ಕಳೆದ ವರ್ಷ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಯಮುನಾ ನದಿ ತೀರದಲ್ಲಿ ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಿಂದಾಗಿ ಆ ಪ್ರದೇಶದ ಪರಿಸರಕ್ಕೆ ಗಂಭೀರ ಹಾನಿಯಾಗಿದ್ದು, ಆರ್ಟ್ ಆಫ್ ಲಿವಿಂಗ್ ದಂಡದ ಹಣ ಠೇವಣಿ ಮಾಡಿದ ನಂತರ ಪುನರುಜ್ಜೀವನ ಕಾರ್ಯ ಕೈಗೊಳ್ಳುವಂತೆ ದೆಹಲಿ ಅಭಿವೃದ್ಧಿ ಪ್ರಾಧಿಕಾರ(ಡಿಡಿಎ)ಗೆ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ನೇತೃತ್ವ ಹಸಿರು ಪೀಠ ಆದೇಶಿಸಿದೆ.