ಇಂದು ಸೂರತ್ ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರು ಬಳಸು ಕೀಳುಮಟ್ಟದ ಭಾಷೆಯನ್ನು ಪ್ರಜಾಪ್ರಭುತ್ವದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ, ಅವರು ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾರೆ. ರಾಯಭಾರಿಯಾಗಿ, ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾರೆ. ಅಂತಹ ವ್ಯಕ್ತಿ ನನ್ನನ್ನು ನೀಚ ಎಂದು ಕರೆದಿದ್ದಾರೆ. ಇಂಥ ನೀಚ ಕೆಲಸವನ್ನು ಅವರು ಮಾತ್ರ ಮಾಡಲು ಸಾಧ್ಯ. ಇದು ಮೊಘಲರ ಸಂಸ್ಕೃತಿಯಲ್ಲದೆ ಬೇರೇನು ಅಲ್ಲ ಎಂದು ಮಣಿಶಂಕರ್ ಅಯ್ಯರ್ ಅವರ ಹೆಸರು ಪ್ರಸ್ತಾಪಿಸಿದೆ ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.