ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರು ಪದೇ ಪದೇ ಕೀಳುಮಟ್ಟದ ಭಾಷೆ ಬಳಸಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ವಿಭಿನ್ನ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ್ದು, ಇಂಥ ಕೆಟ್ಟ ಸಂಪ್ರದಾಯಕ್ಕೆ ಸೊಪ್ಪು ಹಾಕುವುದಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಣಿಶಂಕರ್ ಅಯ್ಯರ್ ಬಳಸಿದ ಭಾಷೆ ಸರಿಯಿಲ್ಲ. ಹೀಗಾಗಿ ಅವರು ಈ ಕೂಡಲೇ ಕ್ಷಮೆಯಾಚಿಸುತ್ತಾರೆ ಎಂದು ನಾನು ಮತ್ತು ಪಕ್ಷ ನಿರೀಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.