ಪಾಟಿದಾರ್ ಅನಾಮತ್ ಅಂದೋಲನದ ಮುಖಂಡ ದಿನೇಶ್ ಬಂಬಾನಿಯಾ ಇಂತಹ ಗಂಭೀರ ಆರೋಪ ಮಾಡಿದ್ದು, ಹಾರ್ದಿಕ್ ಪಟೇಲ್ ಸಮುದಾಯದ ಹೋರಾಟವನ್ನು ತಮ್ಮ ವೈಯುಕ್ತಿಕ ಹಿತಾಸಕ್ತಿ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪಟೇಲ್ ಸಮುದಾಯದ ಬೇಡಿಕೆ ಈಡೇರಿಕೆ ಕುರಿತು ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲವಾದರೂ, ಪಟೇಲ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿರುವುದೇಕೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.