ಸಂಬಿತ್ ಪಾತ್ರ ಅವರ ರಾಷ್ಟ್ರಪಿತ ಹೇಳಿಕೆಗೆ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕು

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಗಾಂಧಿಗೆ ಅವಮಾನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕ್ಷಮೆ ಕೇಳುವುದರೊಂದಿಗೆ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಚಾಟಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂಬಿತ್ ಪಾತ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯನ್ನು ವಿರೋಧಿಸಿರುವ ರಣ್ದೀಪ್ ಸಿಂಗ್ ಸುರ್ಜೆವಾಲ, ಮಹಾತ್ಮ ಗಾಂಧಿಗೆ ಅವಮಾನವಾಗಿರುವುದನ್ನು ದೇಶದ ಜನತೆ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com