ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಏಕ ಪಕ್ಷೀಯ ಅಭಿವೃದ್ಧಿ ಮಾಡಿದ್ದಾರೆ. ಅವರಿಂದ ಕೇವಲ 5-10 ಜನರ ಅಭಿವೃದ್ಧಿಯಾಗಿದೆ. ಎಲ್ಲರಿಗಾಗಿ ಅವರು ಕೆಲಸ ಮಾಡಿಲ್ಲ. ಆದರೆ ದೇವಸ್ಥಾನಕ್ಕೆ ಭೇಟಿ ನೀಡಿದಾಗೆಲ್ಲಾ ಎಲ್ಲರ ಅಭಿವೃದ್ಧಿಗಾಗಿ, ಗುಜರಾತ್ ಜನತೆಯ ಉತ್ತಮ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಈಗ ಹೇಳಿ ನಾನು ನಾನು ದೇವಸ್ಥಾನಕ್ಕೆ ಹೋಗುವುದು ತಪ್ಪಾ? ಎಂದು ಪ್ರಶ್ನಿಸಿದ್ದಾರೆ.