ಆರ್ ಕೆ ನಗರ ಉಪ ಚುನಾವಣೆ: ವೇತನ ಸಹಿತ ರಜೆ ನೀಡಲು ಕಂಪೆನಿಗಳಿಗೆ ಕಾರ್ಮಿಕ ಇಲಾಖೆ ಮನವಿ

ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣ ನಗರ ಉಪ ಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣ ನಗರ ಉಪ ಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ ಸರ್ಕಾರಿ ಸ್ವಾಮ್ಯದ ಹಾಗೂ ಖಾಸಗಿ ಕಂಪನಿಗಳಿಗೆ ಕಾರ್ಮಿಕ ಇಲಾಖೆ ಗುರುವಾರ ಮನವಿ ಮಾಡಿದೆ.
ಆರ್‌ ಕೆ ನಗರ ಕ್ಷೇತ್ರವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಸ್ಮಾಮ್ಯದ ಹಾಗೂ ಖಾಸಗಿ ಕೈಗಾರಿಕೆ, ವಾಣಿಜ್ಯ ಉದ್ಯಮ ಸಂಸ್ಥೆಗಳು ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕಾರ್ಮಿಕ ಇಲಾಖೆ ಆಯುಕ್ತ ಕ.ಬಾಲಚಂದ್ರನ್‌ ಅವರು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಧನದಿಂದಾಗಿ ತೆರವಾಗಿರುವ ಆರ್ ಕೆ ನಗರ ಕ್ಷೇತ್ರಕ್ಕೆ ಡಿಸೆಂಬರ್‌ 21ರಂದು ಉಪ ಚುನಾವಣೆ ನಡೆಯಲಿದ್ದು, ಎಐಡಿಎಂಕೆ ಪಕ್ಷದ ಹಿರಿಯ ನಾಯಕ ಇ. ಮಧುಸೂಧನನ್‌, ಡಿಎಂಕೆಯ ಎನ್‌.ಮರುಧು ಗಣೇಶ್‌ ನಡುವೆ ಹೆಚ್ಚಿನ ಪೈಪೋಟಿ ಕಂಡು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com