ನ್ಯಾಯಮೂರ್ತಿ ಎ. ಕೆ. ಸಿಕ್ರಿ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠವು ಪಟಾಕಿ ನಿಷೇಧದ ವಿರುದ್ಧ ಹೈಕೋರ್ಟ್ ಆದೇಶದ ವಿವರಣೆಯನ್ನು ಜನವರಿ 5 ರಂದು ಕೇಳುವುದಾಗಿ ತಿಳಿಸಿದೆ.
ಈ ತಿಂಗಳ ಪ್ರಾರಂಭದಲ್ಲಿ ದೇಶದಾದ್ಯಂತ ಪಟಾಕಿ ಅಥವಾ ಸುಡುಮದ್ದು ಬಳಕೆ ಮತ್ತು ಉತ್ಪಾದನೆಯ ಮೇಲೆ ನಿಷೇಧವನ್ನು ಕೋರಿ ಸಲ್ಲಿಸಿದ್ದ ಮನವಿ ಆಲಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು.
ಆದರೆ ಇದೀಗ ಕೋರ್ಟ್ ನಾಲ್ಕು ವಾರಗಳಲ್ಲಿ ಈ ಸಂಬಂಧ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.