ಯೋಗಿ ಎಫೆಕ್ಟ್: ವಾರ್ಷಿಕ ಐಎಎಸ್ ಕಾರ್ಯಕ್ರಮದಲ್ಲಿ ನಾನ್ ವೆಜ್ ಮೆನುಗೆ ಕತ್ತರಿ!

ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on
ಲಖನೌ: ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು, ವಾರ್ಷಿಕ ಐಎಎಸ್ ಸಪ್ತಾಹ ಕಾರ್ಯಕ್ರಮದಲ್ಲಿ ನಾನ್ ವೆಜ್ ಗೆ ಕತ್ತರಿ ಬಿದ್ದಿದೆ. 
ಮುಖ್ಯಮಂತ್ರಿಗಳಿಗೆ ಇಷ್ಟವಾಗಿರುವುದು ಹಾಗೂ ಇಷ್ಟವಿಲ್ಲದೇ ಇರುವುದನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ಸಸ್ಯಹಾರಿಗಳಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಆಡಳಿತ ಸೇವೆಯ ಸಪ್ತಾಹ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಮೆನುವಿನಲ್ಲಿ ನಾನ್ ವೆಜ್ ನ್ನು ತೆಗೆದುಹಾಕಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com