2013ರಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಈ ಗಲಭೆ ಪ್ರಕರಣದಲ್ಲಿ ಬರೊಬ್ಬರಿ 60 ಮಂದಿ ಸಾವನ್ನಪ್ಪಿದ್ದರು. ಅಂತೆಯೇ 40 ಸಾವಿರ ಜನರು ತಮ್ಮ ಮನೆ-ಮಟ ತೊರೆದು ನಿರಾಶ್ರಿತರಾಗುವಂತೆ ಆಗಿತ್ತು. ಈ ಪ್ರಕರಣದ ತನಿಖೆಗಾಗಿ ಅಂದು ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ಅದರಂತೆ ತನಿಖೆ ನಡೆಸಿದ್ದ ಎಸ್ ಐಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಈ ವೇಳೆ ಹಾಲಿ ಸಚಿವ ಸುರೇಶ್ ರಾಣಾ, ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಹಾಲಿ ಬಿಜೆಪಿ ಶಾಸಕರಾದ ಸಂಗೀತ್ ಸೋಮ್ ಮತ್ತು ಉಮೇಶ್ ಮಲ್ಲಿಕ್ ಸೇರಿ ಹಲವರು ಈ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿತ್ತು.