ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ

ಉತ್ತರ ಪ್ರದೇಶ ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆಯನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
Updated on
ಲಖನೌ: ಉತ್ತರ ಪ್ರದೇಶ ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆಯನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. 
ಯೋಗಿ ಆದಿತ್ಯನಾಥ್ ಅವರ ಹಿಂದೂ ಯುವ ವಾಹಿನಿಯೊಂದಿಗೆ ಗುರುತಿಸಿಕೊಂಡಿರುವ ಹಿಂದೂ ಜಾಗರಣಾ ಮಂಚ್ ಅಲೀಘರ್ ನಲ್ಲಿರುವ ಹಿಂದೂ ವಿದ್ಯಾರ್ಥಿಗಳು ಬಹುಸಂಖ್ಯಾತರಾಗಿರುವ ಕ್ರೈಸ್ತ ಶಾಲೆಗಳಲ್ಲಿ  ಕ್ರಿಸ್ ಮಸ್ ಆಚರಣೆ ಮಾಡದಂತೆ ಹೇಳಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಪ್ರಕಟಿಸಿದೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿಂದೂ ಜಾಗರಣ ಮಂಚ್ ನ ಅಧ್ಯಕ್ಷ ಸೋನು ಸವಿತ ಕ್ರಿಸ್ ಮಸ್ ಆಚರಣೆಗಾಗಿ ವಿದ್ಯಾರ್ಥಿಗಳಿಗೆ ಬೊಂಬೆಗಳು ಹಾಗೂ ಗಿಫ್ಟ್ ಗಳನ್ನು ತರುವಂತೆ ಸೂಚಿಸಲಾಗುತ್ತಿದೆ, ಈ ಮೂಲಕ ಮುಂದೊಂದು ದಿನ ಮತಾಂತರ ನಡೆಸುವ ಉದ್ದೆಶ ಹೊಂದಲಾಗಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com