ದೆಹಲಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ನ ಅಧ್ಯಕ್ಷರಾಗಿದ್ದ ಸಂದರ್ಭ ಜೇಟ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಅರವಿಂದ ಕೇಜ್ರಿವಾಲ್ ಆರೋಪಿಸಿದ್ದರು. ಈ ಕುರಿತ ಟ್ವೀಟನ್ನು ಹಲವರು ರಿಟ್ವೀಟ್ ಮಾಡಿದ್ದರು. ಕೇಜ್ರಿವಾಲ್, ಅಶುತೋಶ್, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ರಾಘವ್ ಛಡ್ಡಾ ವಿರುದ್ಧ ಅರುಣ್ ಜೇಟ್ಲಿ ಮಾನಹಾನಿ ಪ್ರಕರಣ ದಾಖಲಿಸಿ 10 ಕೋಟಿ ರೂ. ಪರಿಹಾರ ಕೋರಿದ್ದರು.