ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷ ಮತ್ತೆ ಸೋತಿದೆಯಾದರೂ ವೋಟ್ ಮತ್ತು ಸ್ಥಾನಗಳ ಹಂಚಿಕೆಯಲ್ಲಿ ಗಣನೀಯ ಸಾಧನೆ ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ನಾಯಕತ್ವವನ್ನು ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷ ಶಿವಸೇನೆ ಮುಕ್ತಕಂಠದಿಂದ ಶ್ಲಾಘಿಸಿದ್ದು, ರಾಹುಲ್ ಗಾಂಧಿ ಉತ್ಸಾಹಿ ನಾಯಕರಾಗಿದ್ದು, ಗುಜರಾತ್ ನಲ್ಲಿ ಪಕ್ಷವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.