ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಶಾಲೆಯ ಮಾಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಾಲಾ ಬಸ್ ನಿರ್ವಾಹಕ ಅಶೋಕ್ ರನ್ನೂ ಸಹ ಪೊಲೀಸರ ವಶಕ್ಕೆ ಪಡೆದಿದ್ದರು. ಶಾಲೆಯ ಹಂಗಾಮಿ ಮುಖ್ಯೋಪಾಧ್ಯರಾದ ನೀರಜಾ ಬಾತ್ರಾ, ಹಿಂದಿನ ಮುಖ್ಯೋಪಾಧ್ಯಾಯ ರಾಖಿ ವರ್ಮಾ, ಬಸ್ ಚಾಲಕ ಸೌರಭ್ ರಾಘವ್, ನಿವಾರ್ಹಕ ಹರ್ಕೇಶ್ ಪ್ರಧಾನ್ ಹಾಗೂ ಇತರ ಎಂಟು ಕಾವಲುಗಾರರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು.