ಗುರುವಾರ ಬೆಳಗ್ಗೆ ದೆಹಲಿಯ ಪಾಟಿಯಾಲ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಒಪಿ ಸೈನಿ ಅವರು, 2 ಪ್ರಕರಣದ ಆರೋಪಿಗಳ ವಿರುದ್ಧದ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಎ ರಾಜಾ, ಕನ್ನಿಮೋಳಿ ಸೇರಿದಂತೆ ಪ್ರಕರಣದ ಎಲ್ಲ 17 ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವಾದಿಗಿ ಹೇಳಿತ್ತು. ಈ ಆದೇಶದ ಬೆನ್ನಲ್ಲೇ ಕೋರ್ಟ್ ಹೊರವಲಯದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎ ರಾಜಾ ಪರ ವಕೀಲರು, ಪ್ರಕರಣದಲ್ಲಿ ಎ ರಾಜಾ ಅವರನ್ನು ಬಲಿಪಶುವನ್ನಾಗಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.