ಮತದಾರರಿಗೆ ಹಣ ಹಂಚಿಕೆ, ರಾಜಕೀಯ ಪಕ್ಷಗಳ ಮಾರಾಮಾರಿಯಂತಹ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ಇಂದಿನ ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಕಲ್ಪಿಸಲಾಗಿದೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಈ ಹಿಂದೆ ಆರ್ ಕೆ ನಗರದಲ್ಲಿ ಭಾರಿ ಪ್ರಮಾಣದ ಚುನಾವಣಾ ಪ್ರಚಾರ ನಡೆದಿತ್ತು. ಜಯಾ ಸಾವಿನ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಕೆ ಪಕ್ಷ ಮತ್ತೆ ಒಂದಾಗಿದೆಯಾದರೂ ಶಶಿಕಲಾ ಬಣವನ್ನು ಪಕ್ಷದಿಂದ ದೂರವಿಟ್ಟಿದೆ. ಹೀಗಾಗಿ ಈ ಹಿಂದೆ ಇದ್ದ ಎದುರಾಳಿಗಳ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದ್ದು, ಡಿಎಂಕೆ, ಎಐಎಡಿಎಂಕೆ ಮತ್ತು ಶಶಿಕಲಾ ಬಣದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.