ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ವಾಸ್ತವ ಮಾಹಿತಿಯನ್ನು ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರಿಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬ ಪ್ರತಿವಾದಿಗಳ ವಾದವನ್ನು ಕೋರ್ಟ್ ತಳ್ಳಿಹಾಕಿದ್ದು, ಟೆಲಿಕಾಂ ಇಲಾಖೆ(ಡಿಒಟಿ) ನ ನಿರ್ಧಾರದ ಬಗ್ಗೆ ತಿಳಿಸಿರುವ ಪತ್ರ ಹಾಗೂ ಅದರಲ್ಲಿ ಹೇಳಲಾಗಿದ್ದ ತರಂಗಾಂತರ ಹಂಚಿಕೆಯಲ್ಲಿ ಹೊಸ ಪರವಾನಗಿಯ ನೀಡುವುದು ತುರ್ತು ಅಗತ್ಯ, ಈ ಬಗ್ಗೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂಬ ಅಂಶಗಳಿತ್ತು. ಆದರೆ ಈ ಬಗ್ಗೆ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಗಳು ಸರಿಯಾಗಿ ಪರಿಶೀಲನೆ ನಡೆಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಕೋರ್ಟ್ ಹೇಳಿದೆ.