ಜಾರಿ ನಿರ್ದೇಶನಾಲಯ, ಸಿಬಿಐ ಆರೋಪಗಳನ್ನು ತಳ್ಳಿ ಹಾಕಿದ ನ್ಯಾಯಧೀಶ ಒ.ಪಿ.ಸೈನಿ ಅವರು ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ. ನಿಯಮ ಉಲ್ಲಂಘಿಸಿ 2ಜಿ ಹಂಚಿಕೆಯಿಂದ 30,000ಕೋ.ರೂ. ನಷ್ಟವಾಗಿದೆ ಎಂದು ಆರೋಪಿಸಲಾಗಿತ್ತು. ಹಗರಣ ಸಂಬಂಧ ನ್ಯಾಯಾಲಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿತ್ತು. ಒಂದು ಪ್ರಕರಣ ಜಾರಿ ನಿರ್ದೇಶನಾಲಯ, ಇನ್ನೆರಡು ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಿ ತನ್ನ ವರದಿ ಸಲ್ಲಿಸಿತ್ತು.