ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ

ತುರ್ತು ಪರಿಸ್ಥಿತಿಯಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ ನೀಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.
ಆರ್ ಎಸ್ಎಸ್ ಸ್ವಯಂ ಸೇವಕರು
ಆರ್ ಎಸ್ಎಸ್ ಸ್ವಯಂ ಸೇವಕರು
Updated on
ನಾಗ್ಪುರ: ಆರ್ ಎಸ್ಎಸ್ ನ ಕಾರ್ಯಕರ್ತರಷ್ಟೇ ಅಲ್ಲದೇ ತುರ್ತು ಪರಿಸ್ಥಿತಿಯಲ್ಲಿ ಯಾರೆಲ್ಲಾ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರೋ ಅವರೆಲ್ಲರಿಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ಮಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಆರ್ ಎಸ್ಎಸ್ ಈ ಪ್ರಸ್ತಾವನೆಯನ್ನು ವಿರೋಧಿಸಿದೆ ಎಂದು ಹೇಳಲಾಗುತ್ತಿದೆ. 
ಬಿಜೆಪಿ ಸದಸ್ಯ ಏಕಾಂತ್ ಖಡ್ಸೆ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಸ್ತಾವನೆ ನಮ್ಮ ಮುಂದಿದೆ. ಹೊಸ ವರ್ಷದಲ್ಲಿ ನಡೆಯಲಿರುವ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತುರ್ತು ಪರಿಸ್ಥಿತಿಗೆ ವಿರುದ್ಧವಾಗಿ ಹೋರಾಡಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನಮಾನ ನೀಡುವ ವಿಷಯ ಚರ್ಚೆಯಾಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com