ಜಯಲಲಿತಾ ಅವರ ಸಾವಿನ ಬಳಿಕ ಎಐಎಡಿಎಂಕೆ ಪಕ್ಷ ಇಬ್ಭಾಗವಾಗಿದ್ದು, ಈ ಉಪಚುನಾವಣೆ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಶಶಿಕಲಾ ಬಳಗಳಿಗೆ ಪ್ರತಿಷ್ಟೆಯ ಕಣವಾಗಿ ಮಾರ್ಪಟ್ಟಿದೆ. ಪಳನಿಸ್ವಾಮಿ ಬಣದಿಂದ ಹಿರಿಯ ನಾಯಕ ಎ.ಮಧುಸೂದನ್, ಶಶಿಕಲಾ ಬಣದಿಂದ ಟಿಟಿವಿ ದಿನಕರನ್ ಹಾಗೂ ಡಿಎಂಕೆ ಪಕ್ಷದಿಂದ ಮರುಧು ಗಣೇಶ್ ಕಣದಲ್ಲಿ ನಿಂತಿದ್ದಾರೆ.