ಅಂದೂ ಕೂಡ ಉರಿ ಸೆಕ್ಟರ್ ಮೇಲೆ ಉಗ್ರರು ದಾಳಿ ಮಾಡಿ ಹಲವು ಭಾರತೀಯ ಯೋಧರನ್ನು ಕೊಂದು ಹಾಕಿದ್ದರು. ಇದರ ಬೆನ್ನಲ್ಲೇ ರಹಸ್ಯ ಕಾರ್ಯಾಚರಣೆ ಕೈಗೊಂಡಿದ್ದ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿ ಬೀಡು ಬಿಟ್ಟಿದ್ದ ಹತ್ತಾರು ಉಗ್ರ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ್ದಲ್ಲದೇ 40ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿದಿತ್ತು, ಇದೀಗ ಅಂತಹುದೇ ಮತ್ತೊಂದು ಕಾರ್ಯಾಚರಣೆಯನ್ನು ಸೇನೆ ನಡೆಸಿದ್ದು, ಈ ಬಾರಿ ನೇರವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಪಾಕಿಸ್ತಾನಿ ಸೈನಿಕರನ್ನೇ ಮಟ್ಟ ಹಾಕಿ ವಾಪಸ್ ಬಂದಿದೆ ಎಂದು ಮೂಲಗಳು ತಿಳಿಸಿವೆ.