ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 93ನೇ ಜನ್ಮದಿನಾಚರಣೆಯ ಅಂಗವಾಗಿ ಚಂದ್ರಾಪುರದಲ್ಲಿನ ಸರಕಾರಿ ಆಸ್ಪತ್ರೆಯೊಂದರಲ್ಲಿ ದಿನದ ಇಪ್ಪತ್ನಾಲ್ಕು ಗಂಟೆಗಳ ಕಾಲವೂ ಕಾರ್ಯಾಚರಿಸುವ ಔಷಧಿ ಮಳಿಗೆಯೊಂದರ ಉದ್ಘಾಟನೆಗೆ ಸಚಿವರು ಆಗಮಿಸಿದ್ದರು. ಅಂತೆಯೇ ಉತ್ತಮ ಆಡಳಿತ ದಿನ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಈ ವೇಳೆ ಮೇಯರ್, ಉಪಮೇಯರ್ ಬಂದಿದ್ದಾರೆ, ಆದರೆ ಸಮಾರಂಭಕ್ಕೆ ಜಿಲ್ಲಾ ಸಿವಿಲ್ ಸರ್ಜನ್ ಉದಯ್ ನವಾಡೆ ಹಾಗೂ ಮೆಡಿಕಲ್ ಕಾಲೇಜ್ ಡೀನ್ ಎಸ್. ಎಸ್. ಮೋರೆ ಆಗಮಿಸಿರಲಿಲ್ಲ.