ಅಂತೆಯೇ ಘಟನಾ ಸ್ಥಳದಲ್ಲಿ ಎನ್ ಕೌಂಟರ್ ಮುಂದುವರೆದಿದ್ದು, ಇನ್ನೂ 2 ರಿಂದ ಮೂವರು ಉಗ್ರರು ಅವಿತು ಗುಂಡಿನ ದಾಳಿ ನಡೆಸಿದ್ದಾರೆ. ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್ ಪಿ ವೈದ್ ಅವರು, ಮುಂಜಾಗ್ರತಾ ಕ್ರಮವಾಗಿ ರಾಷ್ಟೀರ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ನಾಕಾಬಂದಿ ಹಾಕಲಾಗಿದೆ. ಅಂತೆಯೇ ಸಮೀಪದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ಕಾರ್ಯಾಚರಣಾ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.