ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಬಂಧನಕ್ಕೀಡಾಗಿ ಅಮಾನವೀಯವಾಗಿ ಸಾವನ್ನಪ್ಪಿದ್ದ ಭಾರತೀಯ ಸರಬ್ಡಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್, ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಪಾಕಿಸ್ತಾನದ ವಿರುದ್ಧ ಮತ್ತೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರ ಭೇಟಿ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ದಲ್ಬೀರ್ ಕೌರ್, ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರ ಭೇಟಿ ಪ್ರಹಸನ ಪಾಕಿಸ್ತಾನದ ದೊಡ್ಡ ನಾಟಕ. ಗಾಜಿನ ಮೂಲಕ ಪೋಷಕರನ್ನು ತೋರಿಸಿದ್ದು, ಪಾಕಿಸ್ತಾನದ ಕ್ರೂರತೆಗೆ ಹಿಡಿದ ಕನ್ನಡಿಯಾಗಿದ್ದು, ಇದು ಪಾಕಿಸ್ತಾನದ ಕ್ರೂರ ಹಾಸ್ಯ ಎಂದು ದಲ್ಬೀರ್ ಕೌರ್ ಹೇಳಿದ್ದಾರೆ.