ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರು, ರಾಜ್ಯಪಾಲರು ರಾಜಭವನದಲ್ಲಿಯೇ ಇದ್ದರೂ ಸಹ ಅಪಾಯಿಂಟ್ ಮೆಂಟ್ ಪಡೆದಿಲ್ಲವೆಂಬ ಕಾರಣಕ್ಕೆ ನಮಗೆ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ, ಬದಲಾಗಿ ನಮ್ಮ ಮನವಿ ಪತ್ರವನ್ನು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಅವಕಾಶ ನೀಡದೇ ಇರುವುದಕ್ಕೆ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಪ್ರತಿಭಟನಾ ನಿರತ ರೈತ ವಿರೇಶ್ ಸೋಬರದ ಮಠ ಹೇಳಿದ್ದಾರೆ.