2002ರಲ್ಲಿ ಮುಂಬೈನಲ್ಲಿ ಮೂವರಿಗೆ ಬಿಎಡ್ ಕೋರ್ಸ್ ಗೆ ಪ್ರವೇಶ ಕೊಡಿಸುವುದಾಗಿ ಹೇಳಿ ಅವರಿಂದ ಹಣ ಪಡೆದು ವಂಚಿಸಿದ್ದ. ಈ ಪ್ರಕರಣದಲ್ಲಿ ವಂಚನೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಶತ ಪ್ರಯತ್ನ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಝಾದ್ ಮೈದಾನ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ವಸಂತ್ ವಖಾರೆ ತಿಳಿಸಿದ್ದಾರೆ.