ಎಐಎಡಿಎಂಕೆಯಿಂದ ದಿನಕರನ್ ಬೆಂಬಲಿತ 44 ನಾಯಕರ ಉಚ್ಚಾಟನೆ

ಆರ್ ಕೆ ನಗರ ಉಪ ಚುನಾವಣೆ ಬಳಿಕ ಬಂಡಾಯ ನಾಯಕ ಟಿಟಿವಿ ದಿನಕರನ್ ಬೆಂಬಲಿಗ ನಾಯಕರ ವಿರುದ್ಧ ಎಐಎಡಿಎಂಕೆ....
ಟಿಟಿವಿ ದಿನಕರನ್
ಟಿಟಿವಿ ದಿನಕರನ್
Updated on
ಚೆನ್ನೈ: ಆರ್ ಕೆ ನಗರ ಉಪ ಚುನಾವಣೆ ಬಳಿಕ ಬಂಡಾಯ ನಾಯಕ ಟಿಟಿವಿ ದಿನಕರನ್ ಬೆಂಬಲಿಗ ನಾಯಕರ ವಿರುದ್ಧ ಎಐಎಡಿಎಂಕೆ ಕಠಿಣ ಕ್ರಮ ತೆಗೆದುಕೊಂಡಿದ್ದು, ದಿನಕರನ್ ಬೆಂಬಲ 44 ಮಂದಿಯನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ.
ದಿನಕರನ್ ಬೆಂಬಲಿತ 44 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಎಐಎಡಿಎಂಕೆ ಸಂಚಾಲಕ ಒ ಪನ್ನೀರ್ ಸೇಲ್ವಂ ಹಾಗೂ ಸಹ ಸಂಚಾಲಕ ಕೆ ಪಳನಿಸ್ವಾಮಿ ಅವರು ಘೋಷಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ಎಐಎಡಿಎಂಕೆಯ ಮಧುರೈ, ವಿಲ್ಲುಪುರಂ, ಧರ್ಮಪುರಿ, ತಿರುಚಿರಾಪಳ್ಳಿ ಹಾಗೂ ಪೆರಂಬಲೂರು ಘಟದ ವಿವಿಧ ನಾಯಕರನ್ನು ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com