ಮುಂಬೈ ಅಗ್ನಿ ಅವಘಡ: ನಿರ್ಲಕ್ಷ ವಹಿಸಿದ ಐವರು ಬಿಎಂಸಿ ಅಧಿಕಾರಿಗಳ ಅಮಾನತು

ಮುಂಬೈನ ಲೋವರ್ ಪರೆಲ್ ಪ್ರದೇಶದ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿರುವ ರೆಸ್ಟೊರೆಂಟ್ ನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ...
ಕಮಲ ಮಿಲ್ಸ್ ಅಗ್ನಿ ಅವಘಡ
ಕಮಲ ಮಿಲ್ಸ್ ಅಗ್ನಿ ಅವಘಡ
Updated on
ಮುಂಬೈ: ಮುಂಬೈನ ಲೋವರ್ ಪರೆಲ್ ಪ್ರದೇಶದ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿರುವ ರೆಸ್ಟೊರೆಂಟ್ ನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಐವರು ಅಧಿಕಾರಿಗಳು ಶುಕ್ರವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ನಿರ್ಲಕ್ಷ ವಹಿಸಿದ ಆರೋಪದ ಮೇಲೆ ನಿಯೋಜಿತ ಅಧಿಕಾರಿ, ಜೂನಿಯರ್ ಇಂಜಿನಿಯರ್, ಉಪ ಎಂಜಿನಿಯರ್, ವೈದ್ಯಕೀಯ ಅಧಿಕಾರಿ ಮತ್ತು ಸಹಾಯಕ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ರೆಸ್ಟೊರೆಂಟ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಿಂಗ್​ ಎಡ್ವರ್ಡ್​ ಮೆಮೋರಿಯಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 304ರಡಿಯಲ್ಲಿ ನರಹತ್ಯೆ ಆರೋಪದ ಮೇಲೆ ರೆಸ್ಟೊರೆಂಟ್ ಮಾಲಿಕರ ವಿರುದ್ಧ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com