ಉತ್ತರಾಖಂಡ ರಾಜ್ಯದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಉತ್ತರಾಖಂಡದ ಇತರೆ ರಾಜಕೀಯ ಮುಖಂಡರನ್ನು ಬಳಕೆ ಮಾಡಿ ಅಭಿಮಾನಿಗಳು ತಯಾರಿಸಿರುವ ಈ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡಿತ್ತು. ಬಾಹುಬಲಿ ಚಿತ್ರದಲ್ಲಿ ನಟ ಪ್ರಭಾಸ್ ಶಿವಲಿಂಗವನ್ನು ಹೊತ್ತು ಸಾಗಿದರೆ, ಒಂದೂವರೆ ನಿಮಿಷದ ಈ ವಿಡಿಯೋ ತುಣುಕಿನಲ್ಲಿ ಸಿಎಂ ಹರೀಶ್ ರಾವತ್ ಅವರು ಉತ್ತರಾಖಂಡ ರಾಜ್ಯದ ಜವಾಬ್ದಾರಿಯನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು ರಾಜ್ಯವನ್ನು ರಕ್ಷಿಸಿ ಹೊತ್ತು ಸಾಗುತ್ತಿರುವಂತೆ ಮತ್ತು ಅದನ್ನು ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ವಿಜಯ್ ಬಹುಗುಣ ಅವರು ಆಶ್ಚರ್ಯದಿಂದ ವೀಕ್ಷಿಸುತ್ತಿರುವಂತೆ ಗ್ರಾಫಿಕ್ಸ್ ಮಾಡಲಾಗಿತ್ತು.