ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ, ರಜನಿ ಮೇನಿಯಾ ಇಲ್ಲಿ ನಡೆಯಲ್ಲ: ದಿನಕರನ್ ವ್ಯಂಗ್ಯ

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯೊಲ್ಲ.. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ.. ರಜನಿ ಮೇನಿಯಾ ಕೇವಲ ರಾಜಕೀ. ಸೃಷ್ಟಿಯಷ್ಟೇ.. ಎಂಜಿಆರ್ ಮತ್ತು ಅಮ್ಮಾರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲಾಗದು. ಅಮ್ಮಾ ಬೆಂಬಲಿಗರು ಎಂದಿಗೂ ಹೊಸಬರನ್ನು ಉತ್ತೇಜಿಸುವುದಿಲ್ಲ ಎಂದು ದಿನಕರನ್ ಹೇಳಿದ್ದಾರೆ.
ಇನ್ನು ಇತ್ತೀಚೆಗೆ ನಡೆದ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆ ನಗರದಲ್ಲಿ ಸ್ಪರ್ಧಿಸಿದ್ದ ದಿನಕರನ್ ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com