ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭಗೊಳ್ಳಲಿದೆ: ಯೋಗಿ ಆದಿತ್ಯಾನಾಥ್

ರಾಮ ಮಂದಿರ ನಿರ್ಮಾಣ ಹಾದಿಯಲ್ಲಿ ಉಂಟಾಗಿದ್ದ ಸಂಕಷ್ಟ ಹಾಗೂ ಸಮಸ್ಯೆಗಳು ಬದಿಗೆ ಸರಿಯುತ್ತಿದ್ದು, ಶೀಘ್ರದಲ್ಲಿ ದೇಗುಲ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಿಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ ಅವರು ಶನಿವಾರ ಹೇಳಿದ್ದಾರೆ...
ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್
ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್
Updated on

ರಾಯ್ಪುರ: ರಾಮ ಮಂದಿರ ನಿರ್ಮಾಣ ಹಾದಿಯಲ್ಲಿ ಉಂಟಾಗಿದ್ದ ಸಂಕಷ್ಟ ಹಾಗೂ ಸಮಸ್ಯೆಗಳು ಬದಿಗೆ ಸರಿಯುತ್ತಿದ್ದು, ಶೀಘ್ರದಲ್ಲಿ ದೇಗುಲ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಿಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ ಅವರು ಶನಿವಾರ ಹೇಳಿದ್ದಾರೆ.

ರಾಯ್ಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಚಂಡೀಗಢ ರಾಮನ ತಾಯಿ ಕೌಸಲ್ಯ ಅವರ ತವರು ನಾಡು ಆಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಎದುರಾಗಿ ಸಮಸ್ಯೆಗಳು ಬಗೆಹರಿಯುತ್ತಿದ್ದು, ಶೀಘ್ರದಲ್ಲಿಯೇ ಮಂದಿರ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ.

ದೈವದೂತ ರಾಮನಿಂದ ಪ್ರತೀಯೊಬ್ಬರೂ ಪಾಠ ಕಲಿಯಬೇಕಿದೆ. ದೇಶ ಕಟ್ಟಲು ಜನತೆ ಒಗ್ಗೂಡಿ ಕೆಲಸ ಮಾಡಬೇಕಿದೆ. ಮರ್ಯಾದಾ ಪುರುಷೋತ್ತಮ ರಾಮ ತನ್ನ ಇಡೀ ಜೀವನವನ್ನು ಸಾಮಾಜಿಕ ಸಾಮರಸ್ಯ ಮತ್ತು ಸಮಾನತೆಗಾಗಿ ಮುಡಿಪಾಗಿಟ್ಟಿದ್ದರು. ಹೀಗಾಗಿ ದೇಶ ಕಟ್ಟಲು ದಲಿತರು, ಬುಡಕಟ್ಟು ಜನರು, ಹಿಂದುಳಿದ ಜನರೆನ್ನಲದೆ ಪ್ರತೀಯೊಬ್ಬರೂ ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com