ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಹಾಗೂ ತಮಿಳುನಾಡಿನ ಭಾವಿ ಸಿಎಂ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ನೀಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ತೀರ್ಪು ಬರುವವರೆಗೂ ಶಶಿಕಲಾ ಪದಗ್ರಹಣ ಮಾಡುವುದು ಬೇಡ ಎಂದು ಹೇಳಿ ಸಮಾಜಸೇವಾ ಸಂಸ್ಥೆ ಸುಪ್ರೀಂ ಮೆಟ್ಟಿಲೇರಿದೆ.