ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಕರ್ನಲ್ ಸಿಂಗ್ ಮುಂದುವರಿಕೆ

ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.
ಕರ್ನಲ್ ಸಿಂಗ್
ಕರ್ನಲ್ ಸಿಂಗ್
Updated on
ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. 
ಕ್ಯಾಬಿನೆಟ್ ನ ನೇಮಕಾತಿ ಸಮಿತಿ ಕರ್ನಲ್ ಸಿಂಗ್ ಅವರ ನೇಮಕಾತಿಗೆ ಅನುಮೋದನೆ ನೀಡಿದ್ದು, ಇನ್ನು 2 ವರ್ಷಗಳ ಕಾಲ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಲು ಆದೇಶ ನೀಡಲಾಗಿದೆ. 1984 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕರ್ನಲ್ ಸಿಂಗ್ ಅವರನ್ನು 2016 ರಲ್ಲಿ ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಆಗಸ್ಟ್ ನಲ್ಲಿ ನಿವೃತ್ತರಾಗಬೇಕಿದ್ದ ಕರ್ನಲ್ ಸಿಂಗ್ ಅವರನ್ನು ಈಗ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 
ಕೇಂದ್ರ ವಿಚಕ್ಷಣಾ ಆಯೋಗ(ಸಿವಿಸಿ) ಕಾಯ್ದೆಯ ಪ್ರಕಾರ ಹಾಲಿ ನಿರ್ದೇಶಕರನ್ನು ಕನಿಷ್ಠ 2 ವರ್ಷಗಳ ಕಾಲ ಮುಂದುವರೆಸುವ ಬಗ್ಗೆ ಹೊಸ ಅಧಿಸೂಚನೆ ಹೊರಡಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com