ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಕರ್ನಲ್ ಸಿಂಗ್ ಮುಂದುವರಿಕೆ

ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.
ಕರ್ನಲ್ ಸಿಂಗ್
ಕರ್ನಲ್ ಸಿಂಗ್
ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಕರ್ನಲ್ ಸಿಂಗ್ ಅವರನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಫೆ.8 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. 
ಕ್ಯಾಬಿನೆಟ್ ನ ನೇಮಕಾತಿ ಸಮಿತಿ ಕರ್ನಲ್ ಸಿಂಗ್ ಅವರ ನೇಮಕಾತಿಗೆ ಅನುಮೋದನೆ ನೀಡಿದ್ದು, ಇನ್ನು 2 ವರ್ಷಗಳ ಕಾಲ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಲು ಆದೇಶ ನೀಡಲಾಗಿದೆ. 1984 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕರ್ನಲ್ ಸಿಂಗ್ ಅವರನ್ನು 2016 ರಲ್ಲಿ ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಆಗಸ್ಟ್ ನಲ್ಲಿ ನಿವೃತ್ತರಾಗಬೇಕಿದ್ದ ಕರ್ನಲ್ ಸಿಂಗ್ ಅವರನ್ನು ಈಗ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 
ಕೇಂದ್ರ ವಿಚಕ್ಷಣಾ ಆಯೋಗ(ಸಿವಿಸಿ) ಕಾಯ್ದೆಯ ಪ್ರಕಾರ ಹಾಲಿ ನಿರ್ದೇಶಕರನ್ನು ಕನಿಷ್ಠ 2 ವರ್ಷಗಳ ಕಾಲ ಮುಂದುವರೆಸುವ ಬಗ್ಗೆ ಹೊಸ ಅಧಿಸೂಚನೆ ಹೊರಡಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com