ಉತ್ತರಾಖಂಡ: ಕಾರ್ಮಿಕರ ಮೇಲೆ ಹರಿದ ರೈಲು- 3 ಸಾವು

ನಿರ್ಮಾಣ ಹಂತದ ರೈಲ್ವೇ ಹಳಿ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ರೈಲು ಹರಿದು ಮೂವರು ಮೃತಪಟ್ಟಿರುವ ಘಟನೆ ಹರಿದ್ವಾರದ ಜ್ವಾಲ್ಪುರ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದೆ...
ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ರೈಲ್ವೇ ಅಧಿಕಾರಿಗಳು
ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ರೈಲ್ವೇ ಅಧಿಕಾರಿಗಳು

ಹರಿದ್ವಾರ: ನಿರ್ಮಾಣ ಹಂತದ ರೈಲ್ವೇ ಹಳಿ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ರೈಲು ಹರಿದು ಮೂವರು ಮೃತಪಟ್ಟಿರುವ ಘಟನೆ ಹರಿದ್ವಾರದ ಜ್ವಾಲ್ಪುರ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಳೆದ ರಾತ್ರಿ ರೈಲ್ವೇ ಹಳಿ ಬಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ರೈಲು ಬಂದು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರೈಲ್ವೇ ಇಲಾಖೆಯ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com