ಹಲ್ಲೆ ನಡೆಸಿ ಹತ್ಯೆ ಮಾಡಿರುವವರು ಡಿಎಂಕೆ ಬೆಂಬಲಿಗರು ಎಂದು ಹೇಳಲಾಗುತ್ತಿದ್ದು, ಆರೋಪಿಗಳಾದ ಬಾಬು(28), ರಾಜಾ(35) ಸರವಣನ್(30) ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ತಿರುವಣ್ಣಾಮಲೈ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಒಂದು ವರ್ಷದ ಹಿಂದೆ ಕನಕರಾಜ್ ಗೆ 5 ಕೋಟಿ ರೂಪಾಯಿಗೆ ಭೂಮಿಯೊಂದನ್ನು ಮಾರಾಟ ಮಾಡಿದ್ದೆವು. ಆ ನಂತರ ಕನಕರಾಜ್ ಆ ಭೂಮಿಯನ್ನು ಮತ್ತೋರ್ವರಿಗೆ ಮಾರಾಟ ಮಾಡಿದ್ದರು. ಆದರೆ ನಮಗೆ ಕೊಡಬೇಕಿದ್ದ ಬಾಕಿ ಹಣವನ್ನು ಕೊಟ್ಟಿರಲಿಲ್ಲ, ತಮಗೆ ಬರಬೇಕಿದ್ದ ಹಣವನ್ನು ನೀಡುವಂತೆ ಹಲವು ಬಾರಿ ಕೇಳಿದ್ದರೂ ಪ್ರಯತ್ನಗಳೆಲ್ಲಾ ವ್ಯರ್ಥವಾಗಿತ್ತು ಎಂದು ಹತ್ಯೆಯ ಆರೋಪಿಗಳು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.