ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶವನ್ನು ಹಿಂದೂ ಬಹುಸಂಖ್ಯಾತ ರಾಜ್ಯವನ್ನಾಗಿಸಲು ಹೊರಟಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಟ್ವಿಟರ್ ನಲ್ಲಿ ಉಲ್ಲೇಖಿಸಿದ್ದು ಕಿರಣ್ ರಿಜಿಜು ಈ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಭಾರತ ಧರ್ಮ ನಿರಪೇಕ್ಷ ರಾಷ್ಟ್ರವಾಗಿದ್ದು, ಪ್ರತಿಯೊಂದು ಮತ, ಧರ್ಮದವರು ಶಾಂತಿ ಮತ್ತು ಸ್ವಾತಂತ್ರ್ಯವನ್ನು ಅನುಭವಿಸುವಂತಿರಬೇಕು ಎಂದಿದ್ದಾರೆ.