ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಈ ಸಂಬಂಧ ಇಂದು ಅಂತಿಮ ವರದಿ ಸಲ್ಲಿಸಿದ್ದು, ರೋಹಿತ್ ವೇಮುಲ ದಲಿತ ವಿದ್ಯಾರ್ಥಿಯಲ್ಲ. ಆತ ಇತರೆ ಹಿಂದುಳಿದ ಜಾತಿಗೆ ಸೇರುತ್ತಾನೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ವೇಮುಲಾ ದಲಿತ ವಿದ್ಯಾರ್ಥಿಯೆಂದು ಹೇಳಿ, ಅದಕ್ಕೆ ಪೂರಕವಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಿದ್ದ ರೋಹಿತ್ ತಾಯಿಗೆ ಗುಂಟೂರು ಜಿಲ್ಲಾಡಳಿತ ನೋಟಿಸ್ ಜಾರಿಗೊಳಿಸಿದೆ.