ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್, ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್ ಜನ್ಮ ಭೂಮಿಯನ್ನೇ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಾಯ್ನಾಡಿಗೆ ಮೋಸ ಮಾಡುವ ಮಗ ನಾನಲ್ಲ, ನಾನು ದತ್ತು ಪುತ್ರನಾಗಿದ್ದರೂ ಉತ್ತರ ಪ್ರದೇಶದ ಬಗ್ಗೆ ಕಾಳಜಿ ಹೊಂದಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ.