ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ: ಸ್ಪಷ್ಟನೆ ನೀಡುವಂತೆ ಶಶಿಕಲಾ ಗೆ ಚು. ಆಯೋಗದ ಸೂಚನೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ವಿಕೆ ಶಶಿಕಲಾ ಅವರಿಗೆ ಸೂಚನೆ ನೀಡಿದೆ.
ವಿಕೆ ಶಶಿಕಲಾ
ವಿಕೆ ಶಶಿಕಲಾ
ಚೆನ್ನೈ: ವಿಕೆ ಶಶಿಕಲಾ ಅವರನ್ನು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿರುವುದನ್ನು ಪ್ರಶ್ನಿಸಿದ್ದ ತಮಿಳುನಾಡು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣದ ಅರ್ಜಿಯನ್ನು ಚುನಾವಣಾ ಆಯೋಗ ಮಾನ್ಯ ಮಾಡಿದೆ. 
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ವಿಕೆ ಶಶಿಕಲಾ ಅವರಿಗೆ ಸೂಚನೆ ನೀಡಿದೆ. ಫೆ.28 ರೊಳಗೆ ತಮ್ಮ ಹುದ್ದೆಯ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಕೆ ಶಶಿಕಲಾ ಅವರಿಗೆ ಚುನಾವಣಾ ಆಯೋಗ ಸೂಚಿಸಿದೆ. 
ಚುನಾವಣಾ ಆಯೋಗ ಸ್ಪಷ್ಟನೆ ಕೇಳಿರುವುದು ವಿಕೆ ಶಶಿಕಲಾ ಅವರಿಗೆ ಮತ್ತೊಂದು ಸವಾಲಿನ ಸಂಗತಿಯಾಗಿದ್ದು, ಫೆ.28 ರೊಳಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವುದರ ಬಗ್ಗೆ ಸಂಪೂರ್ಣ ವಿವರಣೆ ನೀಡಿ ಸಮರ್ಥನೆ ನೀಡಬೇಕಿದೆ. 
ಪನ್ನೀರ್​ ಸೆಲ್ವಂ ಗುಂಪಿನಲ್ಲಿರುವ ರಾಜ್ಯಸಭಾ ಸದಸ್ಯ ಮೈತ್ರಿಯನ್​​ ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com