ಎಟವಾದಲ್ಲಿ ಮೊದಲ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್ ಅವರು, ನಾನು ಯಾರನ್ನು ನಂಬಿದ್ದೇನೋ ಅವರೇ ನನ್ನ ಮತ್ತು ನೇತಾಜಿ(ಮುಲಾಯಂ ಸಿಂಗ್ ಯಾದವ್) ಮಧ್ಯ ಭಿನ್ನಾಭಿಪ್ರಾಯ ತಂದಿಟ್ಟಿದ್ದು. ಅವರು ನನ್ನಿಂದ ಸೈಕಲ್(ಸಮಾಜವಾದಿ ಪಕ್ಷದ ಚಿಹ್ನೆ) ಕಿತ್ತಿಕೊಳ್ಳಲು ಯತ್ನಿಸಿದರು ಎಂದು ಪರೋಕ್ಷವಾಗಿ ತಮ್ಮ ಚಿಕ್ಕಪ್ಪನ ವಿರುದ್ಧ ವಾಗ್ದಾಳಿ ನಡೆಸಿದರು, ಶಿವಪಾಲ್ ಯಾದವ್ ಅವರು ಪಕ್ಕದ ಜಸ್ವಂತನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.