ಮುಂಬೈ: ಕಾರಿನ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿಯವರು ವಿರೋಧ ಪಕ್ಷಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ನಿನ್ನೆಯಷ್ಟೇ ಮುಂಬೈ ನಲ್ಲಿ ಮನೋಜ್ ತಿವಾರಿಯವರ ಕಾರಿನ ಮೇಲೆ ಅನಾಮಧೇಯ ವ್ಯಕ್ತಿಗಳು ದಾಳಿ ನಡೆಸಿ, ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿರುವ ಮನೋಜ್ ತಿವಾರಿಯವರು, ಘಟನೆ ನಿಜಕ್ಕೂ ಆಶ್ಚರ್ಯವನ್ನುಂಟು ಮಾಡಿದೆ. ಏನೇ ಆದರೂ ಜನರು ನನಗೆ ಬೆಂಬಲವನ್ನು ನೀಡುತ್ತಿದ್ದಾರೆ. ವಿರೋಧ ಪಕ್ಷಗಳೇ ನನ್ನ ಕಾರಿನ ಮೇಲೆ ದಾಳಿ ಮಾಡಿವೆ. ದಾಳಿ ಮೂಲಕ ನನಗೆ ಬೆದರಿಕೆ ಹಾಕಲು ಯತ್ನ ನಡೆಸಿವೆ. ಆದರೆ, ಇದರಿಂದ ನಾನು ಧೈರ್ಯಗೆಟ್ಟಿಲ್ಲ ಎಂದು ಹೇಳಿದ್ದಾರೆ.
ದಾಳಿ ಸಂಬಂಧ ಈಗಾಗಲೇ ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಲಾಗಿದೆ. ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾನೀಗ ಮುಂಬೈನಲ್ಲಿದ್ದೇನೆ. ಇಲ್ಲಿ ನನ್ನ ಮನೆಯಿದೆ. ಮನೆಯ ಎದುರಿಗೇ ಈ ರೀತಿಯ ಘಟನೆ ನಡೆದಿರುವುದು ನಿಜಕ್ಕೂ ಗಂಭೀರ ಎಂದು ತಿಳಿಸಿದ್ದಾರೆ.
Advertisement