ಶಶಿಕಲಾ ಅವರನ್ನು ಇಂದು ಭೇಟಿ ಮಾಡುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ

ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಭೇಟಿ ಮಾಡುವ ಯಾವುದೇ...
ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ
Updated on
ಚೆನ್ನೈ: ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಇಂದು ಭೇಟಿ ಮಾಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಕುವತ್ತೂರು ರೆಸಾರ್ಟ್ ನಲ್ಲಿರುವ ಪಕ್ಷದ ಶಾಸಕರನ್ನು ಭೇಟಿ ಮಾಡುವ ಯೋಜನೆಯಲ್ಲಿದ್ದಾರೆ.
ಇಂದು ಬೆಂಗಳೂರಿಗೆ ಹೋಗಿ ಶಶಿಕಲಾ ಅವರನ್ನು ಭೇಟಿ ಮಾಡುವುದಿಲ್ಲ. ಕುವತ್ತೂರಿಗೆ ಹೋಗಿ ಶಾಸಕರನ್ನು ಭೇಟಿ ಮಾಡುವುದಾಗಿ ಪಳನಿಸ್ವಾಮಿ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಒ.ಪನ್ನೀರ್ ಸೆಲ್ವಂ ಮತ್ತು ಅವರ ಬಣ ವಿ.ಕೆ.ಶಶಿಕಲಾ ಅವರನ್ನು ಎಐಎಡಿಎಂಕೆಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದ್ದರು.
ಪಕ್ಷದ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಇ. ಮಧುಸೂದನನ್ ಅವರು ಪನ್ನೀರ್ ಸೆಲ್ವಂ ಆದೇಶವನ್ನು ಅಂಗೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com