ಚೆನ್ನೈ: ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಇಂದು ಭೇಟಿ ಮಾಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಕುವತ್ತೂರು ರೆಸಾರ್ಟ್ ನಲ್ಲಿರುವ ಪಕ್ಷದ ಶಾಸಕರನ್ನು ಭೇಟಿ ಮಾಡುವ ಯೋಜನೆಯಲ್ಲಿದ್ದಾರೆ.
ಇಂದು ಬೆಂಗಳೂರಿಗೆ ಹೋಗಿ ಶಶಿಕಲಾ ಅವರನ್ನು ಭೇಟಿ ಮಾಡುವುದಿಲ್ಲ. ಕುವತ್ತೂರಿಗೆ ಹೋಗಿ ಶಾಸಕರನ್ನು ಭೇಟಿ ಮಾಡುವುದಾಗಿ ಪಳನಿಸ್ವಾಮಿ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಒ.ಪನ್ನೀರ್ ಸೆಲ್ವಂ ಮತ್ತು ಅವರ ಬಣ ವಿ.ಕೆ.ಶಶಿಕಲಾ ಅವರನ್ನು ಎಐಎಡಿಎಂಕೆಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದ್ದರು.
ಪಕ್ಷದ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಇ. ಮಧುಸೂದನನ್ ಅವರು ಪನ್ನೀರ್ ಸೆಲ್ವಂ ಆದೇಶವನ್ನು ಅಂಗೀಕರಿಸಿದ್ದಾರೆ.