ವಿದ್ಯುತ್ ದರ ಹೆಚ್ಚಳದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ರೈತರು ವಿಧಾನಸಭೆ ಬಜೆಟ್ ಅಧಿವೇಶನದ ವೇಳೆಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂಧನ ಸಚಿವ ಪುಷ್ಪೇಂದ್ರ ಸಿಂಗ್ ರೈತರಿಗೆ ಮಾತ್ರ ವಿದ್ಯುತ್ ದರ ಹೆಚ್ಚಳವನ್ನು ವಾಪಸ್ ಪಡೆದಿದ್ದು, ಹೆಚ್ಚಿನ ಹೊರೆಯನ್ನು ಸರ್ಕಾರವೇ ಭರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.