2011 ರ ಅಕ್ಟೋಬರ್ 28 ರಂದು ಯುಪಿಎ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದ್ದ, ಈ ಬಗ್ಗೆ ಅಭಿಪ್ರಾಯ ಕೇಳಲು ಗ್ರೂಪ್ ಆಫ್ ಮಿನಿಸ್ಟರ್ಸ್ (ಜಿಒಎಂ) ಸಭೆ ಕರೆದಿತ್ತು. ಆದರೆ ಸಭೆಯಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಮಾತ್ರ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರಂತೆ. ಪ್ರಣಬ್ ಮುಖರ್ಜಿ ಅವರ ವಿರೋಧದಿಂದಾಗಿ ಯುಪಿಎ ಸರ್ಕಾರ ಈ ಯೋಜನೆಯನ್ನು ಕೈಬಿಟ್ಟಿತ್ತೆಂದು ತಿಳಿದುಬಂದಿದೆ.