ಉ.ಪ್ರದೇಶ ಸರ್ಕಾರದ ಬಡವರಿಗೆ ಪಿಂಚಣಿ ಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ

ಬಡವರಿಗಾಗಿ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಪಿಂಚಣಿ ಯೋಜನೆ ವಿರುದ್ಧ ಸಲ್ಲಿಸಿಲಾಗಿದ್ದ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on
ನವದೆಹಲಿ: ಬಡವರಿಗಾಗಿ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಪಿಂಚಣಿ ಯೋಜನೆ ವಿರುದ್ಧ ಸಲ್ಲಿಸಿಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅಲಹಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮುಖ್ಯನ್ಯಾಯಮೂರ್ತಿ ಜೆ ಎಸ್ ಖೆಹರ್, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅದು ಬಡವರ ಯೋಜನೆ ಮತ್ತು 'ಅದೊಂದು ಸುಂದರ ಯೋಜನೆ' ಎಂದು ಹೇಳುವ ಮೂಲಕ ಹೈಕೋರ್ಟ್ ತೀರ್ಪುನ್ನು ಎತ್ತಿ ಹಿಡಿದಿದೆ.
ಪಿಂಚಣಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಶೇ.25ರಷ್ಟು ಮೀಸಲಾತಿ ನೀಡಲಾಗಿದ್ದು, ಇದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com