ಭೋಪಾಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾದಿರುವ ಬಾಬಾ ರಾಮ್ ದೇವ್ ಗರಿಷ್ಠ ಮುಖಬೆಲೆಯ ನೋಟುಗಳಿದ್ದರೆ ಭ್ರಷ್ಟಾಚಾರ, ಆರ್ಥಿಕತೆಯ ಅಪರಾಧ, ರಾಜಕೀಯ ಅಪರಾಧ, ಮತದಾರರನ್ನು ಖರೀದಿಸುವ ಅಪಾಯ ಮತ್ತಷ್ಟು ಹೆಚ್ಚುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದರ ಬಗ್ಗೆ ಚಿಂತಿಸುವುದು ಒಳಿತು ಎಂಬ ಸಲಹೆ ನೀಡಿದ್ದಾರೆ.