ಕಾರ್ಯಾಚರಣೆಯಿಂದ ತೆಗೆದು ಹಾಕುವ ಕಾರ್ಯಕ್ರಮ ಮುಂಬೈ ನಲ್ಲಿ ನಡೆಯಲಿದ್ದು, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನೌಕಾ ಪಡೆಯ ಧ್ವಜವನ್ನು ಹಾರಿಸುವ ಮೂಲಕ 55 ವರ್ಷಗಳ ಕಾಲ ಸಕ್ರಿಯವಾಗಿದ್ದ ಐಎನ್ಎಸ್ ವಿರಾಟ್ ಯುದ್ಧ ನೌಕೆಗೆ ಬೀಳ್ಕೊಡುಗೆ ನೀಡಲಾಗುತ್ತದೆ. ನಿವೃತ್ತಿಯ ನಂತರ ಯುದ್ಧ ನೌಕೆಯ ಭವಿಷ್ಯವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಆದರೆ ಕೆಲವೊಂದು ಮೂಲಗಳ ಮಾಹಿತಿ ಪ್ರಕಾರ ಆಂಧ್ರ ಪ್ರದೇಶ ಸರ್ಕಾರ ಈ ನೌಕೆಯನ್ನು ಪಡೆಯಲು ಉತ್ಸಾಹ ತೋರಿದೆ ಎಂದು ಹೇಳಲಾಗುತ್ತಿದೆ.