ಛತ್ತೀಸ್ಗಡ: ಕ್ಷಿಪ್ರ ಕಾರ್ಯಾಚರಣೆಯಲ್ಲಿ 7 ನಕ್ಸಲರನ್ನು ಹತ್ಯೆಗೈದ ಸೇನೆ

ಛತ್ತೀಸ್ಗಡದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಯ್ಪುರ: ಛತ್ತೀಸ್ಗಡದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಛೊಟ್ಟೆದೊಂಗಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿರುವ ಕಲಾಂ ಗ್ರಾದ ಅರಣ್ಯ ಪ್ರದೇಶದಲ್ಲಿ ನಕ್ಸಲರಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಈ ವೇಳೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಮೂವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ನಕ್ಸಲರನ್ನು ಸೇನಾ ಪಡೆ ಹತ್ಯೆ ಮಾಡಿದೆ ಎಂದು ಸುಂದರ್ ರಾಜ್. ಪಿ ಅವರು ಹೇಳಿದ್ದಾರೆ.

ಕಾರ್ಯಾಚರಣೆ ವೇಳೆ ಇನ್ನೂ ಕೆಲ ನಕ್ಸಲರು ಪರಾರಿಯಾಗಿದ್ದು, ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ಎನ್ ಕೌಂಟರ್ ಪ್ರದೇಶದಲ್ಲಿ 7 ನಕ್ಸಲರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಾಕಷ್ಟು ಪ್ರಮಾಣದ ಸ್ಫೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com